ಲೇಖಕರು: ವಿದ್ವಾನ್ ಶ್ರೀ ಬಿ.ಜಿ.ಅನಂತ
(ಪ್ರತಿಕ್ರಿಯಿಸಿರಿ lekhana@ayvm.in)
ಒಂದು ದಿನ ಕುರಿಗಾಹಿಯೊಬ್ಬ ಎಂದಿನಂತೆ ಕುರಿಗಳನ್ನು ಮೇಯಿಸಲು ಕಾಡಿನ ಅಂಚಿಗೆ ಹೋದ. ಅಚ್ಚರಿಯೆಂಬಂತೆ ಅಂದು ಕಾಡಿನಲ್ಲಿ ಅವನಿಗೆ ಸಿಂಹದ ಮರಿಯೊಂದು ಕಾಣಿಸಿತು. ಕುರಿಗಾಹಿಯು ಇನ್ನೂ ಕಣ್ಣು ಬಿಟ್ಟಿರದ ಆ ಪುಟ್ಟ ಮರಿಯನ್ನು ಕರುಣೆಯಿಂದ ಮನೆಗೆ ಕರೆತಂದ. ಅದನ್ನು ತನ್ನ ಮಂದೆಯಲ್ಲಿನ ಕುರಿಮರಿಗಳಂತೆ ಅಕ್ಕರೆಯಿಂದ ಸಾಕಿದ. ಅದು ಕುರಿಗಳ ಹಾಲನ್ನೇ ಕುಡಿಯುತ್ತ ಕುರಿಗಳ ಜೊತೆಯಲ್ಲಿಯೇ ಬೆಳೆದು ದೊಡ್ಡದಾಯಿತು. ತನ್ನ ತಾಯಿಯನ್ನೂ, ಬಂಧುಗಳನ್ನೂ ಕಂಡಿರದ ಸಿಂಹದ ಮರಿಯು ಇತರ ಕುರಿಮರಿಗಳಂತೆಯೇ ಕುರಿಗಳನ್ನೇ ತನ್ನ ಸಂಗಾತಿಗಳೆಂದು ಭಾವಿಸಿಕೊಂಡಿತು. ಕುರಿಮಂದೆಯ ಜೊತೆಗೆ ನಿತ್ಯವೂ ಕಾಡಿನ ಅಂಚಿನಲ್ಲಿ ಮೇಯುತ್ತಾ, ಕುರಿಗಾಹಿಯ ಕೈಯಲ್ಲಿದ್ದ ಬೆತ್ತಕ್ಕೆ ಬೆದರುತ್ತಾ, ತೋಳಗಳನ್ನು ಕಂಡರೆ ಹೆದರಿ ಓಡುತ್ತಾ, ನೋಡನೋಡುತ್ತಲೇ ಬೃಹದಾಕಾರದ ಸಿಂಹವಾಗಿ ಬೆಳೆಯಿತು.
ಕೇಳುವುದಕ್ಕೆ ಚಂದಮಾಮದ ಕಥೆಯಂತೆ ಕಾಣುವ ಇದು ಜ್ಞಾನಿಗಳ ಕಡೆಯಿಂದ ಬಂದ ಕಥೆಯಾಗಿದೆ. ಸಂಸಾರವೆಂಬ ಕುರಿಮಂದೆಯಲ್ಲಿ ಸಿಲುಕಿ ಎಲ್ಲವಕ್ಕೂ ಹೆದರಿ ಹೆದರಿ ಕುರಿಗಳಂತೆ ಜೀವಿಸುತ್ತಿರುವ ಸಿಂಹದ ಮರಿಗಳು ನಾವೇ ಆಗಿದ್ದೇವೆ. ನಮಗೆ ಆಗಿರುವ ಈ ಆತ್ಮ ವಿಸ್ಮೃತಿಯನ್ನು ಕಳೆದು ನಮ್ಮನ್ನು ನಮ್ಮ ಮೂಲನೆಲೆಯಾದ ಆತ್ಮ ಸಾಮ್ರಾಜ್ಯದ ಕಡೆಗೆ ಕರೆದೊಯ್ಯಲು ಬರುವ ಮತ್ತೊಂದು ಮಹಾ ಸಿಂಹವೇ - ಸರ್ವಜ್ಞನಾದ ಗುರು. ನಮ್ಮ ಮತ್ತು ಗುರುವಿನ ಆತ್ಮಸ್ವರೂಪವು ಒಂದೇ ಆಗಿದೆ. ಅರಿತುಕೊಂಡರೆ, ನಾವೆಲ್ಲರೂ ಆತ್ಮರಾಜ್ಯದ ರಾಜರೇ ಆಗಿದ್ದೇವೆ. ನಮ್ಮನ್ನು ನಾವು ಅರಿತುಕೊಳ್ಳುವುದೇ ಇದರ ಮೊದಲ ಹೆಜ್ಜೆಯಾಗಿದೆ.
ಶ್ರೀರಂಗಮಹಾಗುರುವು, 'ಅಪ್ಪಾ! ನೀವೆಲ್ಲ ಅಮೃತಪುತ್ರರಾಗಿದ್ದೀರಿ. ಪರಮಾತ್ಮನಲ್ಲಿ ನಿಬದ್ಧನಾಗಿ ಚೆನ್ನಾಗಿ ಪಳಗಿರುವ ಗುರುವಿಗೆ ನಿಮ್ಮ ಮನಸ್ಸನ್ನು ಒಪ್ಪಿಸಿಕೊಂಡರೆ ಅದೂ ಕಾಲಕ್ರಮದಲ್ಲಿ ಪಳಗಿಬಿಡುತ್ತದೆ' ಎಂದಿರುವುದನ್ನು ಈ ಸಿಂಹಗಳ ಕಥೆಗೆ ಅನ್ವಯಿಸಿಕೊಳ್ಳಬಹುದಾಗಿದೆ.
To know more about Astanga Yoga Vijnana Mandiram (AYVM) please visit our Official Website, Facebook and Twitter pages